ಜನಪ್ರಿಯ ಒಗಟುಗಳು
ಒಗಟುಗಳು
ಜನಪದ
ಸಾಹಿತ್ಯದಲ್ಲಿ ಒಂದು ಮುಖ್ಯವಾದ ಪ್ರಕಾರ (ರಿಡ್ಲ್). ಕನ್ನಡದಲ್ಲಿ ಒಡಪು, ಮುಂಡಿಗೆ
ಎಂಬ ಬೇರೆ ಹೆಸರಗಳೂ ಉಂಟು. ಒಗಟು ಎಂದರೆ ಒಬ್ಬರು ಮತ್ತೊಬ್ಬರಿಗೆ ಒಡ್ಡಿದ ಸವಾಲು, ಸಮಸ್ಯೆ
ಒಂದು ವಸ್ತುವನ್ನು ಮತ್ತೊಂದು ವಸ್ತುವಿನ ಮೂಲಕ ಚಮತ್ಕಾರವಾಗಿ ವರ್ಣಿಸಿ ಆ ಅವ್ಯಕ್ತ ವಸ್ತುವನ್ನು
ಕಂಡುಹಿಡಿಯುವಂತೆ ಹೇಳುವುದು ಇದರ ಕ್ರಮ. ಒಗಟಿನಲ್ಲಿ ಎರಡು ಸದೃಶವಸ್ತುಗಳಿರಬೇಕು ಒಂದು ಉಪಮಾನ, ಮತ್ತೊಂದು
ಉಪಮೇಯ. ಇಲ್ಲಿ ಉಪಮಾನ ವಾಚ್ಯವಾಗಿರುತ್ತದೆ; ಉಪಮೇಯ ಅಸ್ಪಷ್ಟವಾಗಿ ರಹಸ್ಯವಾಗಿರುತ್ತದೆ. ಅದನ್ನು
ಒಗಟೆಯ ಕರ್ತೃ ಬಹಳ ಜಾಣ್ಮೆಯಿಂದ ಬಚ್ಚಿಟ್ಟಿರುತ್ತಾನೆ. ಉಪಮಾನದ ಆಧಾರದಿಂದ ಉಪಮೇಯವನ್ನು ಪತ್ತೆಮಾಡಬೇಕಾಗುತ್ತದೆ.
ಇದು ಬುದ್ಧಿಶಕ್ತಿಯ ಪರೀಕ್ಷೆಗೊಂದು ಒಳ್ಳೆಯ ಒರೆಗಲ್ಲು.
೧.
ಗೂಡಿನಲ್ಲಿನ ಪಕ್ಷಿ ನಾಡೆಲ್ಲ ನೋಡುತ್ತದೆ- ಕಣ್ಣು
೨.
ಕಾಸಿನ ಕುದುರೆಗೆ ಬಾಲದ ಲಗಾಮು- ಸೂಜಿ ದಾರ
೩.
ಎಲೆ ಇಲ್ಲ, ಸುಣ್ಣ ಇಲ್ಲ, ಬಣ್ಣವಿಲ್ಲ ತುಟಿ ಕೆಂಪಗಾಗಿದೆ, ಮಳೆಯಿಲ್ಲ , ಬೆಲೆಯಿಲ್ಲ , ಮೈ
ಹಸಿರಾಗಿದೆ- ಗಿಳಿ
೪.
ಮನೆ, ಮನೆಗೆರಡು ಬಾಗಿಲು, ಬಾಗಿಲ ಮುಂದೆ , ಮುಚ್ಚಿದರೆ
ಹಾನಿ ಇದೇನು?- ಮೂಗು, ಬಾಯಿ
೫.
ಸುತ್ತ ಮುತ್ತ ಸುಣ್ಣದ ಗೋಡೆ, ಎತ್ತ ನೋಡಿದರೂ ಬಾಗಿಲಿಲ್ಲ ಇದು ಏನು?- ಮೊಟ್ಟೆ
೬.
ಅಂಗಳದಲ್ಲಿ ಹುಟ್ಟುವುದು, ಅಂಗಳದಲ್ಲಿ ಬೆಳೆಯುವುದು, ತನ್ನ
ಮಕ್ಕಳ ಹಂಗಿಸಿ ಮಾತಾಡುವುದು ಇದು ಏನು?- ಕೋಳಿ
೭.
ಇದ್ದಲು ನುಂಗುತ್ತ , ಗದ್ದಲ ಮಾಡುತ್ತಾ, ಉದ್ದಕ್ಕೂ ಓಡುತ್ತಾ ಮುಂದಕ್ಕೆ ಸಾಗುವ ನಾನ್ಯಾರು?- ರೈಲು
೮.
ಊಟಕ್ಕೆ ಕುಳಿತವರು ಹನ್ನೆರಡು ಜನರು, ಬಡಿಸುವವರು ಇಬ್ಬರು, ಒಬ್ಬನು
ಒಬ್ಬರಿಗೆ ಬಡಿಸುವಸ್ಟರಲ್ಲಿ ಇನ್ನೊಬ್ಬನು ಹನ್ನೆರಡು ಜನಕ್ಕೂ ಬಡಿಸಿರುತ್ತಾನೆ- ಗಡಿಯಾರ
೯.
ಹಸಿರು ಹಾವರಾಣಿ, ತುಂಬಿದ ತತ್ರಾಣಿ, ಹೇಳದಿದ್ದರೆ ನಿಮ್ಮ ದೇವರಾಣಿ- ಕಲ್ಲಂಗಡಿ
ಹಣ್ಣು
೧೦.
ಮೊಟ್ಟೆ ಒಡೆಯೋ ಹಾಗಿಲ್ಲ ಕೊಡ ಮುಳುಗಿಸೋ ಹಾಗಿಲ್ಲ ಬರಿ ಕೊಡೆ ತಗೊಂಡು ಬಾರೋ ಹಾಗಿಲ್ಲ-ತೆಂಗು
೧೨.
ಕಡಿದರೆ ಕಚ್ಚೋಕೆ ಆಗೋಲ್ಲ , ಹಿಡದ್ರೆ ಮುಟ್ಟೋಕೆ ಸಿಗೋಲ್ಲ-ನೀರು
೧೩.ಒಂದು
ರುಮಾಲು ನಮ್ಮಪ್ಪನೂ ಸುತ್ತಲಾರ.-ದಾರಿ
೧೪.
ಅಬ್ಬಬ್ಬ ಹಬ್ಬ ಬಂತು, ಸಿಹಿಕಹಿ ಎರಡೂ ತಂತು.-ಯುಗಾದಿ
೧೫.
ಹುಟ್ಟುತ್ತಲೇ ಹುಡುಗ ತಲೆಯಲ್ಲಿ ಟೋಪಿ ಹಾಕಿರುತ್ತೆ .-ಬದನೆಕಾಯಿ.
೧೬.
ಸಾಗರ ಪುತ್ರ ,ಸಾರಿನ ಮಿತ್ರ.-ಉಪ್ಪು
೧೭.
ಸಾವಿರಾರು ಹಕ್ಕಿಗಳು, ಒಂದೇ ಬಾರಿಗೆ ನೀರಿಗಿಳಿತವೆ.-ಅಕ್ಕಿ
೧೮.
ಗುಡುಗು, ಗುಡುಗಿದರೆ ಸಾವಿರ ನಯನಗಳು ಅರಳುವುದು.-ನವಿಲು.
೧೯.
ಕಣ್ಣಿಲ್ಲ, ಕಾಲಿಲ್ಲ ,ಆದರು ಚಲಿಸುತಿದೆ ಯಾವುದು ಎಲ್ಲಿದೆ ಬಲ್ಲಿದನ
ಹೇಳಿರಲ.-ನದಿ
೨೦.
ಹಲ್ಲಿಲ್ಲದ ಹಕ್ಕಿಗೆ ಗೂಡು ತುಂಬ ಮರಿಗಳು.- ಕೋಳಿ
೨೧.
ಮೋಟು ಗೋಡೆ ಮೇಲೆ, ದೀಪ ಉರೀತಿದೆ.- ಮೂಗುಬೊಟ್ಟು
೨೨.
ಹೊಂಚು ಹಾಕಿದ ದೆವ್ವ, ಬೇಡ ಬೇಡ ಎಂದರೂ ಜೂತೆಯೇ ಬರುತ್ತೆ.-ನೆರಳು
೨೩.
ಮರನು ಮರನೇರಿ ಮತ್ತೆ ಮರನೇರಿ ಬಸವನಾ ಕತ್ತೇರಿ ತಿರುಗುತ್ತಿದೆ-ಗಾಣ
೨೪.
ಹೊಕ್ಕಿದ್ದು ಒಂದಾಗಿ ಹೊರಟಿದ್ದು ಅದು ನೂರಾಗಿ-ಶ್ಯಾವಿಗೆ
೨೫.
ಮಣ್ಣು ಆಗಿದೆ ಕಲ್ಲು ಸಿಕ್ಕಿತು, ಕಲ್ಲು ಆಗಿದೆ ಬೆಳ್ಳಿ ಸಿಕ್ಕಿತು, ಬೆಳ್ಳಿ
ಒಡೆದ ನೀರು ಸಿಕ್ಕಿತು-ತೆಂಗಿನಕಾಯಿ
೨೬.
ಕತ್ತಲೆ ಮನೆಯಲಿ ಕಾಳವ್ವ ಕುಂತವ್ಳೆ ಕುಯ್ಯೋ, ಮರ್ರೋ ಅಂತವಳೇ-ತಂಬೂರಿ
೨೭.
ಹಾರಿದರೆ ಹನುಮಂತ, ಕೂತರೆ ಮುನಿ, ಕೂಗಿದರೆ ಕಾಡಿನ ಒಡೆಯ-ಕಪ್ಪೆ
೨೮.
ಕೈಲಿದ್ದಾಗ ಗುದಿಸಾಡುತ್ತೇನೆ, ಕೈ ಬಿಟ್ಟಾಗ ಗೊರಕೆ ಒಡೆಯುತ್ತೇನೆ-ಕಸಪೊರಕೆ
೨೯.
ಗಿಡ ಕೊಡಲಾರದು, ಮರ ಬೆಳೆಸಲಾರದು ಅದಿಲ್ಲದೆ ಊಟ ಸೇರಲಾರದು-ಉಪ್ಪು
೩೦.
ನೀರಿಲ್ಲದ ಸಮುದ್ರ, ಜನರಿಲ್ಲದ ಪಟ್ಟಣ, ಸಂಚಾರವಿಲ್ಲದ ಮಾರ್ಗಗಳು ಎಲ್ಲಿ?-ನಕ್ಷೆ
೩೧.
ಒಬ್ಬನನ್ನು ಹಿಡಿದರೆ ಎಲ್ಲಾರ ಮರ್ಜಿಯು ಗೊತ್ತಾಗುತ್ತದೆ.- ಅನ್ನದ ಅಗುಳು.
೩೨.
ಮೇಲೆ ನೋಡಿದರೆ ನಾನಾ ಬಣ್ಣ, ಉಜ್ಜಿದರೆ ಒಂದೇ ಬಣ್ಣ.-ಸಾಬೂನು.
೩೩.
ಒಂದು ಕೊಂಬಿನ ಗುಳಿ ಅದರ ತಲೆಯೆಲ್ಲಾ ಮುಳ್ಳು.-ಬದನೆಕಾಯಿ.
೩೪.
ನಾನು ತುಳಿದೆ ಅದನ್ನ, ಅದು ತುಳಿಯೆತು ನನ್ನನ್ನ.-ನೀರು
೩೫.
ಕೊಳದ ಒಳಗೆ ಒಂದು ಮರ ಹುಟ್ಟಿ ,ಬೇರು ಇಲ್ಲ ,ನೀರು ಇಲ್ಲ.-ಎಣ್ಣೆ ದೀಪ.
೩೬.
ಬಡ ಬಡ ಬಂದ ಅಂಗಿ ಕಳಚಿದ ,ಬಾವಿಯೊಳಗೆ ಬಿದ್ದ.-ಬಾಳೆ ಹಣ್ಣು.
೩೭.
ನೋಡಿದರೆ ನೋಟಗಳು ,ನಕ್ಕರೆ ನಗುಗಳು ,ಒಡೆದರೆ
ತುಂಡುಗಳು.-ಕನ್ನಡಿ
೩೮.
ಅಕ್ಕ ಪಕ್ಕ ಚದುರಂಗ ,ಅದರ ಹೂವು ಪದುರಂಗ ಅದರ ಹೆಸರು ಅಯ್ಯಯ್ಯಪ್ಪ .ಇದು ಏನು?-ದತ್ತುರಿಯ
ಮುಳ್ಳು.
೩೯.
ವನದಲ್ಲಿ ಹುಟ್ಟಿ ,ವನದಲ್ಲಿ ಬೆಳೆದು ,ವನದಿಂದ
ಹೊರಟು ವನಜಲೊನೆ ಶಿರಕ್ಕೆರುವರು.-ಕಮಲ.
೪೦.
ಕಲ್ಲು ಕೋಳಿ ಕುಗುತ್ತದೆ, ಮುಲ್ಲ ಚೂರಿ ಹಾಕುತ್ತಾನೆ.-ಗಿರಣಿ
೪೧.
ಸಾವಿರ ತರುತ್ತೆ ಲಕ್ಷ ತರುತ್ತೆ ನೀರಿನಲ್ಲಿ ಹಾಕಿದರೆ ಸಾಯುತ್ತೆ.-ದುಡ್ಡು.
೪೨.
ತಕ್ಕಡೀಲಿ ಇಟ್ಟು ಮಾರೋ ಹಾಗಿಲ್ಲ, ಅದಿಲ್ಲದೆ ಹಬ್ಬ ಅಗೋ ಹಾಗಿಲ್ಲ.-ಸಗಣಿ.
೪೩.
ಚರಚರ ಕೊಯ್ತದೆ ಕತ್ತಿ ಅಲ್ಲ, ಮಿಣಿಮಿಣಿ ಮಿಂಚುತ್ತದೆ ಮಿಂಚಲ್ಲ, ಪೆಟ್ಟಿಗೆಗೆ
ತುಂಬ್ತದೆ ದಾಗಿನ ಅಲ್ಲ.- ಗರಗಸ.
೪೪.
ಕಡ್ಲೆ ಕಾಳಷ್ಟು ಹಿಂಡಿ೩೨ ಮನೆ ಸಾರಿಸಿ ಬಚ್ಚಲ ಪಾಲು ಆಗುತ್ತೆ.-ಹಲ್ಲುಪುಡಿ.
೪೫.
ಕರಿ ಗುಡ್ಡ-ಬಿಳಿ ನೀರು ಅದ್ರಾಗೆ ಕುಂತವಳೇ ಚಂಪರಾಣಿ.-ಗಡಿಗೆಮಜ್ಜಿಗೆ.
೪೬.
ಕೆಂಪು ಕುದುರೆ ಮೇಲೆ ಒಬ್ಬ ಏರುತ್ತಾನೆ, ಒಬ್ಬ ಇಳಿಯುತ್ತಾನೆ .-ರೊಟ್ಟಿ, ದೋಸೆ
೪೭.
ಕೆಂದ ಕುದುರೆ ,ಬಿಳಿ ತಡಿ, ಕರೆ ಲಗಾಮು, ಅಣ್ಣ ಅತ್ತಾನೆ, ತಮ್ಮ ಇಳಿತ್ತಾನೆ-ಬೆಂಕಿ, ಸುಣ್ಣ
ಹಚ್ಚಿದ ಹಂಚು, ಹೊಗೆ, ರೊಟ್ಟಿ
೪೮.
ಕಂಬ ಕಂಬದ ಮೇಲೆ ದಿಂಬ, ದಿಂಬದ ಮೇಲೆ ಲಾಗಲೂಟೆ, ಲಾಗಲೂಟೆ
ಮೇಲೆ ಎರಡು ಹುಡ್ಗರು ಓಡ್ಯಾಡುತಾರೆ.-ಕಣ್ಣು.
೪೯.
ಶತ್ತಗಿಂಡಿ, ಶಾರಾಗಿಂಡಿ, ನೀರಾಗಿ ಹಕ್ಕಿದರೆ ಮುಳುಗದು ಮುತ್ತಿನ ಗಿಂಡಿ.-ಬೆಣ್ಣೆ
ಉಂಡೆ.
೫೦.ಕುತ್ತಿಗೆ
ಇದೆ ತಲೆ ಇಲ್ಲ, ತೋಳಿದೆ ಬೆರಳಿಲ್ಲ, ದಡಾ ಇದೆ, ಕಾಲಿಲ್ಲ.-ಅಂಗಿ.
೫೧.
ಹಸಿರು ಗಿಡದ ಮೇಲೆ ಮೊಸರು ಚೆಲ್ಲಿದೆ-ಮಲ್ಲಿಗೆ
೫೨.
ಅಂಗೈ ಅಗಲದ ರೊಟ್ಟಿಗೆ ಲೆಕ್ಕವಿಲ್ಲದಷ್ಟು ಉಪ್ಪಿನಕಾಯಿ-ಆಕಾಶ, ನಕ್ಷತ್ರ
೫೩.
ಸುಟ್ಟ ಹೆಣ ಮತ್ತೆ ಸುಡ್ತಾರೆ-ಇದ್ದಿಲು
೫೪.
ಚಿನ್ನದ ಪೆಟ್ಟಿಗೆಯಲ್ಲಿ ಬೆಳ್ಳಿ ಲಿಂಗ- ಬಾಳೆ ಹಣ್ಣು
೫೫.
ಅಂಗೈ ಕೊಟ್ಟರೆ ಮುಂಗೈನೂ ನುಂಗುತ್ತದೆ- ಬಳೆ
೫೬.
ಒಂದು ಹಪ್ಪಳ ಊರಿಗೆಲ್ಲ ಊಟ- ಚಂದ್ರ
೫೭.
ಆಕಾಶದಲ್ಲಿ ಕೊಡಲಿಗಳು ತೇಲಾಡುತ್ತವೆ- ಹುಣಸೇಹಣ್ಣು
೫೮.
ನೀಲಿ ಕೆರೆಯಲಿ ಬಿಳಿ ಮೀನು-ನಕ್ಷತ್ರ
೫೯.
ಒಂದು ತೇಲುತ್ತೆ ,ಒಂದು ಮುಳುಗುತ್ತೆ, ಒಂದು ಕರಗುತ್ತೆ.-ವಾರ,ತಿಂಗಳು,ವರ್ಷ
೬೦.
ಬಾ ಅಂದರೆ ಬರೋಲ್ಲ , ಹೋಗು ಅಂದರೆ ಹೋಗೋಲ್ಲ-ಮಳೆ
೬೧.
ನಾ ಇರುವಾಗ ಬರುತ್ತೆ , ನಾ ಹೋದ ಮೇಲೂ ಇರುತ್ತೆ-ಕೀರ್ತಿ
೬೨.
ಬೆಳ್ಳಿ ಸಮುದ್ರದಲ್ಲಿ ಕಪ್ಪು ಸೂರ್ಯ-ಕಣ್ಣು
೬೩
ಅಕ್ಕನ ಮೇಲೆ ಛತ್ರಿ- ರೆಪ್ಪೆ
೬೪.
ತಮ್ಮಂಗೆ ಮೂರು ಕಣ್ಣು ಅಮ್ಮಂಗೆ ಒಂದೇ ಕಣ್ಣು-ತೆಂಗಿನ ಕಾಯಿ
೬೫.
ಅಕ್ಕ ಓದುತ್ತಾಳೆ ತಂಗಿ ನಡೀತ್ತಾಳೆ-ಕಣ್ಣು
೬೬.ಅಮ್ಮನ
ಆಕಾಶವಾಣಿ ನಾನು-ಮಗು
೬೭.
ಅಂಗಡಿಯಿಂದ ತರೋದು ಮುಂದಿಟ್ಟುಕೊಂಡು ಅಳೋದು-ಈರುಳ್ಳಿ
೬೮.
ಅಂಗಣ್ಣ ಮಂಗಣ್ಣ ಅಂಗಿ ಬಿಚ್ಚಿಕೊಂಡು ನುಂಗಣ್ಣ- ಬಾಳೆಹಣ್ಣು
೬೯.
ಗೂಡ್ನಲ್ಲಿರೋ ಜೋಡಿ ಪಕ್ಷಿ ಊರೆಲ್ಲ ನೋಡುತ್ತೆ-ಕಣ್ಣು
೭೦.
ಒಂದು ಮಡಕೆ, ಮಡಕೆಯೊಳಗೆ, ಕುಡಿಕೆ, ಕುಡಿಕೆಯಲ್ಲಿ ಸಾಗರ-ತೆಂಗಿನ ಕಾಯಿ
೭೧.
ನೀನಿಲ್ಲದೆ ಊಟವಿಲ್ಲ- ಉಪ್ಪು
೭೨.
ಬಿಳಿ ಸರದಾರನಿಗೆ ಕರಿ ಟೋಪಿ-ಬೆಂಕಿಕಡ್ಡಿ
೭೩.
ಕಾಲಿಲ್ದ ಹುಡುಗಿಗೆ ಮಾರುದ್ದ ಕಡಿವಾಣ - ಸೂಜಿ
೭೪.
ಮೂರು ಕಾಸಿನ ಕುದುರೆಗೆ ಮುನ್ನೂರು ರೂಪಾಯಿನ ಹಗ್ಗ-ಹೇನು ಕೂದಲು
೭೫.
ಕೆಂಪು ಕುದುರೆಗೆ ಲಗಾಮು, ಓಬ್ಬ ಹತ್ತುತ್ತಾನೆ , ಇನ್ನೊಬ್ಬ
ಇಳಿತಾನೇ-ಬೆಂಕಿ,ಬಾಣಲೆ, ದೋಸೆ
೭೬
. ಒಂದು ಮನೆಗೆ ಒಂದೇ ತೊಲೆ-ತಲೆ
೭೭.
ಕಂದ ಬಂದ ಕೊಂದ ತಂದ-ಶ್ರೀ ರಾಮ ಚಂದ್ರ
೭೮.
ಕಲ್ಲಿಲ್ಲದ ಬೆಟ್ಟ ಮರಳಿಲ್ಲದ ಮರುಭೂಮಿ-ಭೂಪಟ
೭೯.
ಚಿಕ್ಕಕ್ಕನಿಗೆ ಪುಕ್ಕುದ್ದ-ಸೌಟು
೮೦.
ಎರಡು ಮನೆಗೆ ಒಂದೇ ದೂಲ-ಮೂಗು
೮೧.
ನೀರಿರೋತಾವ ನಿಲ್ಲಲೇ ಕೋಣ-ಚಪ್ಪಲಿ
೮೨.
ಹೋದ ನೆಂಟ, ಬಂದ ದಾರಿ ಗೊತ್ತಿಲ್ಲ-ನೆರಳು
೮೩.
ಮರದೊಳಗೆ ಮರ ಹುಟ್ಟಿ ಮರ ಚಕ್ರ ಕಾಯಾಗಿ ತಿನ್ನಬಾರದ ಹಣ್ಣು ಬಲು ರುಚಿ-ಮನುಷ್ಯನ ಹುಟ್ಟು
ಮಗು
೮೪.
ಕಲ್ಲರಳಿ ಹೂವಾಗಿ, ಎಲ್ಲರಿಗೂ ಬೇಕಾಗಿ, ಮಲ್ಲಿಕಾರ್ಜುನನ ಗುಡಿಗೆ ಬೆಳಕಾಗಿ, ಬಲ್ಲವರು
ಹೇಳಿ -ಸುಣ್ಣ
೮೫.
ಚಿಣಿಮಿನಿ ಎನ್ನುವ ಕೆರೆ, ಚಿಂತಾಮಣಿ ಎನ್ನುವ ಹಕ್ಕಿ, ಕೆರೆ
ಬತ್ತಿದರೆ ಹಕ್ಕಿಗೆ ಮರಣ -ದೀಪ
೮೬.
ಹೋಗುತ್ತಾ, ಬರುತ್ತಾ ಇರುವುದು ಎರಡು,ಹೋದ ಮೇಲೆ ಬರಲಾರವು ಎರಡು-ಸಿರಿತನ-ಬಡತನ, ಪ್ರಾಣ
-ಬಡತನ
೮೭.
ಒಂದು ಹಸ್ತಕ್ಕೆ ನೂರೆಂಟು ಬೆರಳು-ಬಾಳೆಗೊನೆ
೮೮.
ಎಲ್ಲರ ಮನೆ ಅಜ್ಜಿಗೆ ಮೈಯೆಲ್ಲಾ ಕಜ್ಜಿ -ಜರಡಿ
೮೯.
ಎಂದರೆ ತೆರಿತಾವ, ಅಪ್ಪ ಎಂದರೆ ಮುಚ್ಚುತಾವ-ಬಾಯಿ
೯೦.
ದಾಸ್ ಬುರುಡೆ ದೌಲಥ ಬುರುಡೆ, ಲೋಕಕ್ಕೆಲ್ಲ ಎರಡೇ ಬುರುಡೆ-ಸೂರ್ಯ , ಚಂದ್ರ
೯೧.
ಅಪ್ಪ ಆಕಾಶಕ್ಕೆ ಅವ್ವ ಪಾತಾಳಕ್ಕೆ ಮಗ ವ್ಯಾಪಾರಕ್ಕೆ ಮಗಳು ಮದುವೆಗೆ -ಅಡಿಕೆ ಮರ
೯೨.ಹಾರಾಡುತ್ತಿದೆ
ಗಾಳಿಪತವಲ್ಲ , ಬಣ್ಣ ಮೂರಿರುವುದು ಕಾಮನಬಿಲ್ಲಲ್ಲ-ಧ್ವಜ
೯೩.
ನೀಲಿ ಸಾಗರದಲ್ಲಿ ಬೆಳ್ಳನೆ ಮೀನುಗಳು ನಾನ್ಯಾರು?-ತಾರೆಗಳು
೯೪.
ಬಿಡಿಸಿದರೆ ಹೂವು, ಮದಚಿದರೆ ಮೊಗ್ಗು ,ಇದು ಏನು?-ಛತ್ರಿ
೯೫.
ಆರು ಕಾಲು ಅಂಕಣ್ಣ ಮೂರು ಕಾಲು ದೊಂಕಣ್ಣ ಸದಾ ಮೀಸೆ ತಿರುವಣ್ಣ-ನೊಣ
೯೬.
ಒಂಟಿಕಾಲಿನ ಕುಂಟ. ನಾನ್ಯಾರು?-ಬುಗರಿ
೯೭.
ಕಪ್ಪು ಕಂಬಳಿ ನೆಂಟ ಎಲ್ಲವನು ನಾಶ ಮಾಡೋಕೆ ಹೊಂಟ-ಇಲಿ
೯೮.
ಹಲ್ಲು ಹಾಕಿದರೆ ಹಾಲು ಕೆಡೋಲ್ಲ ಕಲ್ಲು ಹಾಕಿದರೆ ಕೆಡುತ್ತೇ-ಕಳ್ಳಿ
೯೯.
ಕಾಡಿನಲ್ಲಿ ಹುಟ್ಟುವುದು ಕಾಡಿನಲ್ಲಿ ಬೆಳೆಯುವುದು ಕಡಿದಲ್ಲಿ ಕಂಪ ಸೂಸುವೆನು-ಶ್ರೀಗಂಧ
೧೦೦.
ಹಸಿರು ಕೋಟೆ, ಬಿಳಿ ಕೋಟೆ, ಕೆಂಪಿನ ಕೋಟೆ ಈ ಕೋಟೆಯೊಳಗೆ ಕಪ್ಪು ಸಿಪಾಯಿಗಳು-ಪರಂಗಿ
ಹಣ್ಣು
೧೦೧.ಒಂದು
ಮನೆಯಲ್ಲಿ ಮೂರು ಜನ ಅಕ್ಕ-ತಂಗಿಯರಿದ್ದಾರೆ ಆದರೆ ಒಬ್ಬರ ಮುಖ ಕಂಡರೆ ಒಬ್ಬರಿಗೆ
ಕಾಣೋಲ್ಲ- ಜಾದಳಕಾಯಿ
೧೦೨.
ಅಂಕಡೊಂಕಿನ ಬಾವಿ ಹೊಕ್ಕು ನೋಡಿದ್ರೆ ಮುಕ್ಕ ನೀರಿಲ್ಲ-ಕಿವಿ
೧೦೩.
ಕೆಂಪು ಕುದುರೆ ಕರಿ ತಡಿ ಒಬ್ಬ ಏರುತಾನೆ ಒಬ್ಬ ಇಳಿತಾನೆ-ರೊಟ್ಟಿ
೧೦೪.
ಮೂರೂ ಪಕ್ಷಿಗಳು ಗೂಡಿಗೆ ಹೋಗುವಾಗ ಬೇರೆ ಬೇರೆ ಬಣ್ಣ ಬರುವಾಗ ಬಣ್ಣ-ಎಲೆ ಅದಿಕೆ
೧೦೫.
ಆಕಾಶದೊಳಗಿನ ಗಿಣಿ ಊಟದ ಹೊತ್ತಿಗೆ ರಾಣಿ-ಬಾಳೆಲೆ
೧೦೬.
ಎರಡು ಬಾವಿಗಳ ನಡುವೆಯೊಂದು ಸೇತುವೆ-ಮೂಗು
೧೦೭.
ತಲೆ ಇಲ್ಲ , ನಡು ಇಲ್ಲ , ಕೈಗಳಿದ್ದರು ಬೆರಳಿಲ್ಲ-ಕೋಟು ಅಂಗಿ
೧೦೮.
ತಿಂಡಿಗೆ ಕಡಿಮೆ ಇಲ್ಲ ,ತೀರ್ಥ ಕುಡಿದರೆ ಸಾವು -ವಿಷ
೧೦೯
. ಒಬ್ಬಳು ಮುಲುಗಿದಳು, ಒಬ್ಬಳು ಕರಗಿದಳು , ಒಬ್ಬಳು
ತೇಲಿದಳು -ಅಡಿಕೆ , ಸುಣ್ಣ
೧೧೦.ಹೋಗೋದು
ಮುಳುಗೋದು ತರೋದು ಏನು?-ಬಿಂದಿಗೆ
೧೧೧.
ಕಿರೀಟ ಇದೆ ರಾಜ ಅಲ್ಲ, ಕಲ ತಿಳಿಸುತ್ತ್ತೆ ಗಡಿಯಾರವಲ್ಲ-ಕೋಳಿ
೧೧೨.
ಒಂದು ಹಣ್ಣಿಗೆ ಹನ್ನೆರಡು ತೊಳೆ ಮತ್ತೂ ಮೂವತ್ತು ಬೀಜ-ವರ್ಷ
೧೧೩.
ಗುಂಡಾಕಾರ ಮೈಯೆಲ್ಲಾ ತೂತು-ದೋಸೆ
೧೧೪.ಬಂಗಾರದ
ಗುಬ್ಬಿ ಬಾಲದಲ್ಲೇ ನೀರನ್ನು ಕುಡಿಯುತ್ತೆ-ಚಿಮಿಣಿ
೧೧೫.
ಒಂದು ಮರ , ಮರದಾಗ ಅಲ್ಲ, ಅಲ್ಲಿನಾಗ ಕೊಬ್ರಿ ಗುಂಡ-ಆಕಾಶ ನಕ್ಷತ್ರ ಚಂದ್ರ
೧೧೬.
ಅನ್ನ ಮಾಡಲಿಕ್ಕೆ ಬಾರದಂತಹ ಅಕ್ಕಿ ಯಾವುದು-ಏಲಕ್ಕಿ
೧೧೭.
ಬೆಳ್ಳಿ ಬಟ್ಟಲಲ್ಲಿ ಮುತ್ತಿನ ಬಿಂದು-ತಾರೆ
೧೧೮.
ಲಟಪಟ ಲೇಡಿಗೆ ಒಂದೇ ಕಣ್ಣು-ಸೂಜಿ
೧೧೯.
ಹಸಿರು ಕೋಲಿಗೆ ಮುತ್ತಿನ ತುರಾಯಿ-ಜೋಳದ ತೆನೆ
೧೨೦.
ಬಿಳಿ ಹುಲ್ಲಲ್ಲಿ ಕೆಂಪು ಕುರಿಮರಿ-ನಾಲಿಗೆ
೧೨೧.
ಸೂಜಿ ಸಣ್ಣಕಾಗೆ ಬಣ್ಣ -ಕೂದಲು
೧೨೨.
ಹೋದರು ಇರುತ್ತೆ ಬಂದರೂ ಕಾಡುತ್ತೆ.ಇದು ಏನು?-ನೆನಪು
೧೨೩.
ಆರು ಕಾಲಿನ ಆನೆ, ಆನೆ ತಿನ್ನುತ್ತೆ ನೀರು ಕುಡಿಯಲ್ಲ-ನುಸಿ
೧೨೪.
ಊರಿಗೆಲ್ಲ ಒಂದೇ ಕಂಬಳಿ-ಆಕಾಶ
೧೨೫.
ಅಟ್ಟದ ಮೇಲೆ ಪುಟ್ಟ ಲಕ್ಷ್ಮಿ-ಕುಂಕುಮ
೧೨೬.
ಕರಿ ಹೊಲದ ಮದ್ಯದಲ್ಲಿ ಬೇಲಿ ದಾರಿ-ಬೈತಲೆ
೧೨೭.
ಒಂದು ಬತ್ತಿ ಮನೆಯೆಲ್ಲ ಬೆಳಕು-ಸೂರ್ಯ
೧೨೮.ಕಣ್ಣಿಗೆ
ಕಾಣೋದಿಲ್ಲ, ಕೈಗೆ ಸಿಗೋದಿಲ್ಲ -ಗಾಳಿ
೧೨೯.
ಕಣ್ಣಿಗೆ ಹತ್ತಿರ ಕಾಲಿಗೆ ದೂರ-ಬೆಟ್ಟ
೧೩೦.
ಊಟಕ್ಕೆ ಮೊದಲು ನಾನು ಅಂತ ಬರುತ್ತೆ -ಬಾಳೆ ಎಲೆ , ತಟ್ಟೆ
೧೩೧.
ಹಸಿರು ಮೈ ಹಳದಿ ಮೈ ಪೇಟೇಲಿ ಕುಳಿತು ಎಲ್ಲರನ್ನು ಕರೆಯುತ್ತೆ-ಮಾವು
೧೩೨.
ಹುಲಿಯ ಚಿಕ್ಕಮ್ಮ , ಇಲಿಯ ಮುಕ್ಕಮ್ಮ-ಬೆಕ್ಕು
೧೩೩.
ಕೂಗಿದರೆ ರಾವಣ, ಹಾರಿದರೆ ಹನುಮಂತ, ಕೂತರೆ ಮುನಿ-ಕಪ್ಪೆ
೧೩೪.
ಕಲ್ಲಲ್ಲಿ ಹುಟ್ಟುವುದು, ಕಲ್ಲಲ್ಲಿ ಬೆಳೆಯುವುದು, ನೆತ್ತಿಯಲ್ಲಿ
ಕುತಗುಟ್ಟುವುದು-ಸುಣ್ಣ
೧೩೫.
ಕಾಂತಾಮಣಿ ಎಂಬ ಪಕ್ಷಿ, ಚಿಂತಾಮಣಿ ಎಂಬ ಕೆರೆ, ಕೆರೆಯಲ್ಲಿ
ನೀರಿಲ್ದೆ ಹೋದ್ರೆ ಪಕ್ಷಿಗೆ ಮರಣ-ದೀಪ
೧೩೬.
ಕಲ್ಲು ತುಳಿಯುತ್ತೆ, ಮುಳ್ಳು ಮೆಯುತ್ತೆ, ನೀರು ಕಂಡ್ರೆ ನಿಲ್ಲುತ್ತೆ-ಚಪ್ಪಲಿ
೧೩೭.
ಕಾಲಿಲ್ಲದೇ ನಡೆಯುವುದು, ತಲೆ ಎಲ್ಲಡೆ ನುಡಿಯುವುದು, ಮೇಲು
ಕೆಳಗಾಗಿ ಓದುವುದು-ನದಿ
೧೩೮.
ಜಂಬು ನೇರಳೆ ಮರ, ಎಳೆದರೆ ನಾಲ್ಕು ಬಾವಿ ನೀರು ಒಂದೇ ಆಗುತ್ತದೆ-ಮೇಡು
೧೩೯.
ಇಡೀ ಮನೆಗೆಲ್ಲ ಒಂದೇ ಕಂಬಳಿ, ಬಾಯಿ ತೆರೆದರೆ ಮೂಗು ಮುಚ್ಚುತ್ತಿ-ಆಕಾಶ
೧೪೦.
ಒಂದು ಕಾಲಿನ ಪಕ್ಷಿಗೆ ಒಂಭತ್ತು ರೆಕ್ಕೆ, ಒಂದೇ ಕಾಲಲಿ ನಿಂತು ನೂರಾರು ಮೊಟ್ಟೆ ಇಡುತ್ತದೆ-ಜೋಳದ
ದಂಟು
೧೪೧.
ಎತ್ತ ಹೋದರು ಕುತ್ತಿಗೆಗೆ ಕೈ ಹಾಕುತ್ತಾರೆ! ನಾನ್ಯಾರು?-ಸಾಲಿಗ್ರಾಮ
೧೪೨.
ಕರಿ ಹುಡುಗನಿಗೆ ಬಿಳಿ ಟೋಪಿ -ಹೆಂಡದ ಮಡಿಕೆ
೧೪೩.
ಬಿಳಿ ಆಕಾಶದಲ್ಲಿ ಕಪ್ಪು ನಕ್ಷತ್ರಗಳು,ಇದನ್ನು ನೋಡಲು ಜನ ಕಾದಿಹರು-ನಾಣ್ಯ
೧೪೪.
ಗೋಡೆ ಗುದ್ದಪ್ಪ ನೀನಿದ್ದಲ್ಲಿ ನಿದ್ದೆ ಇಲ್ಲಪ್ಪ.-ತಿಗಣೆ
೧೪೫.
ಕುದುರೆ ಬಾಲದಿಂದ ನೀರು ಕುಡಿಯುತ್ತದೆ-ಹೇನು
೧೪೬.
ಬಿಳಿ ಸಾಮ್ರಾಜ್ಯದಲ್ಲಿ ಕಪ್ಪು ಪ್ರಜೆಗಳು.-ಸೀತ ಫಲ
೧೪೭.
ಅಣ್ಣ ಅತ್ತರೆ ತಮ್ಮನೂ ಅಳುತ್ತಾನೆ.-ಕಣ್ಣು
೧೪೮.
ಮನೆ ಮೇಲೆ ಮಲ್ಲಿಗೆ ಹೂವು.-ಮಂಜು
೧೪೯.
ಹಾರಿದರೆ ಹನುಮಂತ ಕೂಗಿದರೆ ಶಂಖ.-ಕಪ್ಪೆ
೧೫೦.
ನೋಡಿದರೆ ಕಲ್ಲು ನೀರು ಹಾಕಿದರೆ ಮಣ್ಣು.-ಸುಣ್ಣ
೧೫೧.ಸುದ್ದಿ
ಸೂರಪ್ಪ ದೇಶವೆಲ್ಲಾ ಸುತ್ತಾಡ್ತಾನೆ.-ಪೋಸ್ಟ್ ಕಾರ್ಡ್
೧೫೨.
ಬಿಳಿ ಕುದುರೆಗೆ ಹಸಿರು ಬಾಲ.-ಮೂಲಂಗಿ
೧೫೩.
ಚಿಕ್ಕ ಬೆಟ್ಟದಲ್ಲಿ ಪುಟ್ಟ ಚಂದ್ರ.-ಕುಂಕುಮ
೧೫೪.
ಬರೋದ ಕಂಡು ಕೈ ಒಡ್ತಾರೆ.-ಬಸ್
೧೫೫.
ಹತ್ತಾರು ಮಕ್ಕಳ ತಂದೆ ಅದಕ್ಕೆ ತಲೆಯ ಮೇಲೆ ಜುಟ್ಟು-ಹುಂಜ
೧೫೬.
ಹಸಿರು ಮುಖಕ್ಕೆ ವಿಪರೀತ ಕೋಪ , ಕೋಪ ಮಾಡಿಕೊಳ್ಳದೆ ನಾನ್ಯಾರೆಂದು ಹೇಳಿ?-ಮೆಣಸಿನಕಾಯಿ
೧೫೭.
ಅಜ್ಜಿ ಗುದ್ದಿದರೆ ಮನೆಯೆಲ್ಲ ಮಕ್ಕಳು ಈಗ ಹೇಳಿ ನಾನ್ಯಾರು-ಬೆಳ್ಳುಳ್ಳಿ
೧೫೮.
ಹಗಲಲ್ಲಿ ಮಾಯಾ ರಾತ್ರಿಯಲ್ಲಿ ಪ್ರತ್ಯಕ್ಷ ?ನಾನ್ಯಾರು ಹೇಳಿ?-ನಕ್ಷತ್ರ
೧೫೯.ಹಗ್ಗ
ಹಾಸಿದೆ ಕೋಣ ಮಲಗಿದೆ-ಕುಂಬಳಕಾಯಿ, ಬಳ್ಳಿ
೧೬೦.
ನನ್ನ ಕಂಡರೆ ಎಲ್ಲರು ಓದೀತಾರೆ -ಚೆಂಡು
೧೬೧.
ಹಳ್ಳಿ ಗಡಿಯಾರ, ಒಳ್ಳೆ ಆಹಾರ-ಕೋಳಿ
೧೬೨.
ನೀರು ಇರುತ್ತೆ ನದಿ ಅಲ್ಲ, ಬಾಗಿಲು ಇರುತ್ತೆ ಮನೆ ಅಲ್ಲ-ಕಣ್ಣು.
೧೬೩.
ಬಲಗೈಯಲ್ಲಿ ಗೀತೆ ಎಡಗೈಯಲ್ಲಿ ರಾಟೆ ಹಿಡಿದಿದ್ದೆ ನಾನು ಯಾರು-ಗಾಂಧೀಜಿ
೧೬೪.
ಬಾಯಲ್ಲಿ ಹಲ್ಲಿಲ್ಲ, ಮಯಲ್ಲಿ ಶಕ್ತಿ ಇಲ್ಲ , ತಲೆಯಲ್ಲಿ
ಕೂದಲಿಲ್ಲ , ಆದ್ರೂ ಎಲ್ರುನ್ನು ಕಾಡತಿನಿ ನಾನ್ಯಾರು.-ಸೊಳ್ಳೆ
೧೬೫.
ಅಕ್ಷರಗಳಿದ್ದರೂ ಪುಸ್ತಕವಲ್ಲ,ಸಿಂಹವಿದ್ದರೂ ಅರಣ್ಯವಲ್ಲ,ದುಂಡಾಗಿದ್ದರೂ
ಚಕ್ರವಲ್ಲ,ನಾನ್ಯಾರು.-ನಾಣ್ಯ
೧೬೬.
ಗಂಟೆ ಹೊಡೆಯುತ್ತಾನೆ ಪೂಜಾರಿ ಅಲ್ಲ, PAPER ಅರಿಯುತ್ತಾನೆ ಆದರೆ ಹುಚ್ಚುನೂ ಅಲ್ಲ, ಹಣ
ಕೇಳುತ್ತಾನೆ ಭಿಕ್ಷುಕ ಅಲ್ಲ -ಕಂಡಕ್ಟರ್
೧೬೯.
ಹಿಡಿದರೆ ಹಿಡಿಯಷ್ಟು ಬಿಟ್ಟರೆ ಮನೆತುಂಬ-ದೀಪದ ಬೆಳಕು
೧೭೦.
ಕಾಲಿಲ್ಲದೆ ನಡೆಯುವುದು ಬಾಯಿಲ್ಲದೆ ನುಡಿಯುವುದು ಇದರ ಹೊಟ್ಟೆ ಹಲವಕ್ಕೆ ಮನೆಯಾಗಿರುವುದು-ನದಿ
೧೭೧.
ಚೋಟುದ್ದ ಹುಡುಗಿಗೆ ಮಾರುದ್ದ ಜಡೆ - ಸೂಜಿ ದಾರ
೧೭೨.
ಊರುಂಟು ಜನರಿಲ್ಲ ನದಿಯುಂಟು ನೀರಿಲ್ಲ - ಭೂಪಟ.
೧೭೩.
ಚಿಕ್ಕ ಬೋರನಿಗೆ ಬಾಲದಲ್ಲಿ ಕತ್ತಿ : ಹುರಳಿಕಾಯಿ
೧೭೪.
ಬಿಳಿಯ ಹೊಲದಲ್ಲಿ ಕರಿ ಕಾಳು ಕೈಯಲ್ಲಿ ಬಿತ್ತುತ್ತಾರೆ ಬಾಯಲ್ಲಿ ಏತ್ತುತ್ತಾರೆ ನಾನು ಯಾರು :
ಪುಸ್ತಕ ಮತ್ತು ಅಕ್ಷರಗಳು
೧೭೫.
ಮೂರು ಕಡೆ ನೀರು ನೆತ್ತಿ ಮೇಲೆ ಬೆಟ್ಟ ಹಾಗಾದರೆ ನಾನು ಯಾರು?
: ಭಾರತ
೧೭೬.
ನಾಲ್ಕು ಕಂಬಗಳುಂಟು ದೇವಾಲಯವಲ್ಲ; ಎರಡು ಮೊರಗಳುಂಟು ಕೇರಲಾಗುವುದಿಲ್ಲ; ಒಂದು
ಕಹಳೆಯುಂಟು ಊದಲಾಗುವುದಿಲ್ಲ; ಹಾಗಾದರೆ ನಾನು ಯಾರು? : ಆನೆ
೧೭೭.
ಮೂರು ಕಡೆ ನೀರು ನೆತ್ತಿ ಮೇಲೆ ಬೆಟ್ಟ ಹಾಗಾದರೆ ನಾನು ಯಾರು?
: ಭಾರತ
೧೭೮.
ಕರಿ ಕಂಬ್ಳಿ ನೆಂಟ, ಸರೊತ್ತಿನಲ್ಲಿ ಹೊಂಟ, ಅವನ್ಯಾರು? : ಹೆಗ್ಗಣ
೧೭೯.
ರಾಮನಂತ ಸಮುದ್ರ ರತ್ನದಂತ ಮೀನು ನೀರು ಬತ್ತಿಹೋದ್ರೆ ಮೀನು ಸತ್ತು ಹೋಗುತ್ತೆ : ದೀಪ / ಹಣತೆ
೧೮೦.
ಕಲ್ಲರಳಿ ಹೂವಾಗಿ, ಎಲ್ಲರಿಗು ಬೇಕಾಗಿ,. ಮಲ್ಲಿಕಾರ್ಜುನನ ಶಿಖರಕ್ಕೆ ಬೆಳಕಾಗಿ. ಬಲ್ಲವರು ಹೇಳಿ
ಸರ್ವಜ್ಞ”-ಸುಣ್ಣದ ಕಲ್ಲು!
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ